Monthly Archive: April 2017

ಸುಟ್ಟ ಜೋಳ ಮತ್ತು ಕಾರ ಹಾಕಿದ ಮಾವಿನಕಾಯಿ

ಮುತ್ತಾನಲ್ಲೂರು ಬಿಟ್ಟ ಮೇಲೆ ನಾವು ಹೆಬ್ಬಗೋಡಿಗೆ ಬಂದೆವು. ಅಪ್ಪ, ಅಮ್ಮ ಇಬ್ಬರಿಗೂ ಆನೇಕಲ್ ಹತ್ತಿರ ಕೆಲಸ. ಮುತ್ತಾನಲ್ಲೂರು ಬಿಡುವಾಗಲೆ ಅಪ್ಪನಿಗೆ ಆನೇಕಲ್‌ಗೆ ಸ್ಥಳಾಂತರವಾದರೆ ಅನುಕೂಲ ಎನ್ನುವ ಯೋಚನೆ. ಅದರೆ ಅಮ್ಮನಿಗೆ ಅಲ್ಲಿಯ ಯಾವುದೇ ಶಾಲೆ ಇಷ್ಟವಾಗಲಿಲ್ಲ. ಅವಳ ಕಾನ್ವೆಂಟ್ ಶಾಲೆಯ ಒಳ್ಳೆಯ ಅನುಭವದ ಹಿನ್ನಲೆಯೋ ಏನೋ, ಕಾನ್ವೆಂಟ್ ಶಾಲೆಗಳ ಮೇಲೆ ಅಪಾರ ನಂಬಿಕೆ. ಅಮ್ಮ ನಮ್ಮನ್ನು ಎಸ್.ಎಫ್.ಎಸ್ ಕನ್ನಡ ಮಾಧ್ಯಮ ಶಾಲೆಗೆ ಸೇರಿಸಿದಳು. ಆಗ ನಾನು ಮೂರನೆಯ ಹಾಗು ತಂಗಿ ಎರಡನೆಯ ತರಗತಿ. ಮೊದಲ...

ನಿನ್ನ ತಪ್ಪಿಗೆ ನೀನೆ ಹೊಣೆ

ಮುತ್ತಾನಲ್ಲೂರು ಬಿಟ್ಟರೂ, ಅಮ್ಮ ಅಲ್ಲಿನ ಸಂಬಂಧಗಳನ್ನು ಬಿಡಲಿಲ್ಲ. ಆಗಾಗ ಹೋಗುವುದು ಇದ್ದೇ ಇತ್ತು. ಅಮ್ಮ ಆ ಊರಿಗೆ ಬಂದಾಗ ಇಪ್ಪತ್ತೆರಡೋ ಇಪ್ಪತ್ಮೂರೋ ವಯಸ್ಸು. ಅಮ್ಮನಿಗೆ ಸ್ವಂತಿಕೆ, ಸಂಬಳ, ಗೌರವ, ಸ್ನೇಹಿತರು, ಪ್ರೀತಿ, ಮುಂದೆ ಕುಟುಂಬ ಕೊಟ್ಟ ಊರದು. ಅದು ಅಮ್ಮನಿಗೆ ಮರು ಹುಟ್ಟು ಕೊಟ್ಟ ಊರು ಅಂತಲೆ ಅವಳ ಭಾವನೆ. ಈಗ ೨೦೧೭ರ ಬೆಂಗಳೂರಿನಲ್ಲಿ ಒಂಟಿ ಹೆಣ್ಣು ಮಕ್ಕಳಿಗೆ ಮನೆ ಬಾಡಿಗೆ ಕೊಡಲು ಯೋಚನೆ ಮಾಡುವ ಮನಸ್ಥಿತಿ ಇರುವಾಗ, ಆಗ ಚಿಕ್ಕರಾಮರೆಡ್ಡಿ ಹಾಗು ಚೆನ್ನಕ್ಕ...

ನಾಗರತ್ನಮ್ಮನ ಬಾಲಗಳು

ನನಗೆ ತುಂಬಾ ನೆನಪಿಗೆ ಬರುವ ಬಾಲ್ಯದ, ಅಮ್ಮನ ಸಂಗತಿಗಳು ಅಂದರೆ ಶಾಲೆ. ನನ್ನ ಶಾಲೆಯಲ್ಲ ನನ್ನಮ್ಮನ ಶಾಲೆ. ನಾವಾಗ ಇದ್ದದ್ದು ಆನೇಕಲ್ ತಾಲೂಕಿನ ಮುತ್ತಾನಲ್ಲೂರು ಹಳ್ಳಿಯಲ್ಲಿ. ಅಲ್ಲಿನ ಸರಕಾರಿ ಶಾಲೆಯಲ್ಲಿ ಅಮ್ಮ ಶಿಕ್ಷಕಿ. ಅದೇ ಊರಿನ ಸರಕಾರಿ ಪಶುವೈದ್ಯ ಶಾಲೆಯಲ್ಲಿ ಅಪ್ಪ ಕಾಂಪೌಂಡರ್. ಆ ಊರಿನಲ್ಲಿ ಯಾವ ಬೇಬಿ ಸಿಟ್ಟಿಂಗ್ ಇರಲಿಲ್ಲ. ನಮಗ್ಯಾವ ನೆಂಟರು ಇರಲಿಲ್ಲ. ಸಹಾಯಕಿಯನ್ನು ಇಟ್ಟುಕೊಳ್ಳುವಷ್ಟು ಸ್ಥಿತಿವಂತರೇನಾಗಿರಲಿಲ್ಲ. ಅದರೆ ಅಂಗನವಾಡಿ ಇತ್ತು. ಅದನ್ನ ನೋಡಿಕೋಳ್ತಾ ಇದ್ದವರು ರತ್ನಮ್ಮನವರು. ನಂತರ ಅವರು ಅಮ್ಮನ...